dtvkannada

ಬಂಟ್ವಾಳ: ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಂಗಳೂರು ಕಡೆಯಿಂದ ಮಡಂತ್ಯಾರು ಕಡೆ ಬರುತ್ತಿದ್ದ ಕಾರು ಮತ್ತು ಧರ್ಮಸ್ಥಳದಿಂದ ಮಂಗಳೂರು ಕಡೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ಕಾರು ಚಾಲಕ ಮಡಂತ್ಯಾರು ಕೀರ್ತಿ ಕ್ಯಾಟ್ರರ್ಸ್ ಇದರ ಮಾಲಕ ರೋಷನ್ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.

ಗಂಭೀರ ಗಾಯಗೊಂಡಿದ್ದ ರೋಷನ್ ಅವರನ್ನು ಹೆಚ್ಚಿ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನಾಳೆ ನಡೆಯಲಿರುವ ಒಂದು ಸಮಾರಂಭಕ್ಕೆ ಕ್ಯಾಟರಿಂಗ್ ಇದ್ದ ಸಲುವಾಗಿ ಮಂಗಳೂರಿಗೆ ಮೀನು ಖರೀದಿ ಮಾಡಿ ಹಿಂತಿರುಗುವ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಮೃತರು ಪತ್ನಿ ಅಮಿತ, ಇಬ್ಬರು ಮಕ್ಕಳಾದ ಕೀರ್ತಿ, ಕೀರ್ತನ ರವರನ್ನು ಅಗಲಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!