dtvkannada

ಉಡುಪಿ: ತನ್ನ ಬರ್ತ್‌ಡೇ ಆಚರಿಸುವ ಸಂದರ್ಭ ತಲವಾರಿನಿಂದ ಕೇಕ್‌ ಕಟ್‌ ಮಾಡುವ ಮೂಲಕ ಆಚರಿಸಿದ ಪರಿಣಾಮ ಜೈಲು ಕಂಬಿ ಎಣಿಸಿದ ಘಟನೆ ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆಯೆಂದು ವರದಿಯಾಗಿದೆ.

ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.

ಉಳಿದಂತೆ ಬರ್ತ್‌ಡೇ ಬಾಯ್‌ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ತಲೆಮರೆಸಿಕೊಂಡ ಆರೋಪಿಗಳೆಂದು ತಿಳಿದು ಬಂದಿದೆ.

ಮೇ.30ರಂದು ಪಡುಬಿದ್ರಿಯ ಜಿತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ತಲ್ವಾರ್‌ ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದರು. ಬರ್ತ್‌ಡೇ ಸೆಲೆಬ್ರೇಷನ್‌ನ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು.

ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಎಸ್ಪಿ ಗಮನಕ್ಕೆ ಬಂದಿದೆ. ತಕ್ಷಣ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪಡುಬಿದ್ರಿ ಎಸ್ಸೈ ಅವರಿಗೆ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ನಂತರ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿರುವ ಜಾರಪ್ಪ ಮನೆಗೆ ದಾಳಿ ಮಾಡಿದ ಪೊಲೀಸ್ ತಂಡ ಅಲ್ಲಿದ್ದ ಮೂವರನ್ನು ಬಂಧಿಸಲಾಗಿದೆ.

ಉಳಿದಂತೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಆರೋಪಿಗಳಿಗಾಗಿ ಬಲೆ ಬೀಸಿದೆಯೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!