ವಿಟ್ಲ: ಸೈಕಲ್ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕನ್ಯಾನ ಸಮೀಪದ ಕಣಿಯೂರು ಎಂಬಲ್ಲಿ ನಡೆದಿದೆ.
![](http://dtvkannada.in/wp-content/uploads/2022/06/IMG-20220605-WA0031-1024x787.jpg)
ಮೃತ ಬಾಲಕನನ್ನು ಕಣಿಯೂರು ಹಸೈನಾರ್ ಎಂಬವರ ಪುತ್ರ ಮಹಮ್ಮದ್ ಅಖಿಲ್(12) ಎಂದು ತಿಳಿದು ಬಂದಿದೆ.
ಇಂದು ಸಂಜೆ ಹಾಲಿನ ಡಿಪೋಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
![](http://dtvkannada.in/wp-content/uploads/2022/06/IMG-20220605-WA0033-1024x645.jpg)
ಜೆಸಿಬಿ ಚಾಲಕ ಗದಗ ಮೂಲದವನಾಗಿದ್ದು, ಪಾನಮತ್ತನಾಗಿದ್ದ ಎನ್ನಲಾಗಿದೆ. ಸ್ಥಳದಲ್ಲೇ ಮೃತಪಟ್ಟ ಬಾಲಕನ ಮೃತದೇಹ ಮತ್ತು ಸೈಕಲ್’ಅನ್ನು ಜೆಸಿಬಿ ಕೊಕ್ಕಿನಿಂದ ಪಕ್ಕಕ್ಕೆ ಸರಿಸಿ ಚಾಲಕ ಪರಾರಿಯಾಗಲು ಯತ್ನಿಸಿದ್ದಾನೆ.
![](http://dtvkannada.in/wp-content/uploads/2022/06/IMG-20220605-WA0032.jpg)
ವಿಷಯ ತಿಳಿದ ಸಾರ್ವಜನಿಕರು ಪಾನಮತ್ತ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಬಾಲಕ ಕಣಿಯೂರು ಶಾಲೆಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಎನ್ನಲಾಗಿದೆ.