dtvkannada

ಸಳ್ಯ: ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರಿಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಇವರ ಸಾಧನೆ ಪರಿಗಣಿಸಿ 2022ನೇ ಸಾಲಿನ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು, ಆನಾಹೊಸುರ್ ಮಠಾಧಿಪತಿಗಳು, ನಾಗರಹಾಳ ನಿರುಪಾದಿ ಕವಿಗಳು, ಯುವಕವಿ ವಿಜಯ್ ದಾಸ್ ನವಲಿ ಇನ್ನಿತರರು ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!