ವಿಟ್ಲ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ತಾಲೂಕು ಘಟಕ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ, ಜೇಸಿಐ ವಿಟ್ಲ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ನಾಳೆ (ಮಂಗಳವಾರ) ವಿಟ್ಲದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಲಿದೆ.
ರೆಡ್ ಕ್ರಾಸ್ ಪುತ್ತೂರು ಇದರ ಕಾರ್ಯಕ್ರಮ ಸಂಯೋಜನಾ ಉಪಸಮಿತಿ ಮುಖ್ಯಸ್ಥರಾದ ಡಾ.ಮಸ್ಕರೇನ್ಹಸ್ ಪ್ಯಾಟ್ರಿಕ್ ಸಿಪ್ರಿಯನ್ ರವರು ರಕ್ತದಾನ ದಿನದ ಕುರಿತು ಮಾತುಗಳನ್ನಾಡಲಿದ್ದಾರೆ. ವೈದ್ಯಾಧಿಕಾರಿ ಡಾ. ಜೆ.ಎನ್ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ 20ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಸಮಾಜಸೇವಕರನ್ನು ಗುರುತಿಸಿ ಗೌರವಿಸಲಾಗುತ್ತದೆ.
ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಆಗಮಿಸಿ ರಕ್ತದಾನ ಮಾಡಿ ಜೀವದಾನಿಗಳಾಗಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.