dtvkannada

ಕುಮುಟಾ: ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತರಕನ್ನಡ ಜಿಲ್ಲೆಯ ಕುಮಟಾ ಸಮೀಪ ನಡೆದಿದೆ.

ಕುಮುಟಾ ತಾಲೂಕಿನ ಹೊಲನಗೆದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ್ ನಾಯ್ಕ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಇವನು ಕುಮಟಾದ ಖಾಸಗಿ ಕಾಲೇಜು ವಿದ್ಯಾರ್ಥಿಯಾಗಿದ್ದು ಪಿಯುಸಿ ಫೇಲ್ ಆದ ಕಾರಣ ಮನನೊಂದು ತನ್ನ ಕೋಣೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈತನ ತಂದೆ ಆಟೊ ಚಾಲಕನಾಗಿದ್ದು ದಂಪತಿಗೆ ಒಬ್ಬನೇ ಮಗನಾಗಿದ್ದು ಇದೀಗ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!