dtvkannada

ಮಂಗಳೂರು: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ (ರಿ) ದೇರಳಕಟ್ಟೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ರಕ್ತನಿಧಿ ದೇರಳಕಟ್ಟೆ, ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು 26 ಜೂನ್ 2022 ರಂದು (ಭಾನುವಾರ) ದೇರಳಕಟ್ಟೆ ಬದ್ರಿಯಾ ಜುಮಾ ಮಸ್ಜಿದ್ ವಠಾರದಲ್ಲಿ ನಡೆಯಲಿದೆ

ಸಮಯ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 01:00 ರ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯು ಒಂದೇ ತಿಂಗಳಿನಲ್ಲಿ ಗರಿಷ್ಟ 24 ರಕ್ತದಾನ ಶಿಬಿರಗಳನ್ನು ಹಾಗೂ ಒಂದೇ ದಿನದಲ್ಲಿ ಗರಿಷ್ಟ 21 ರಕ್ತದಾನ ಶಿಬಿರಗಳನ್ನು ಆಯೋಜಿಸಿದ ಕೀರ್ತಿಯನ್ನು ಕೂಡಾ ತನ್ನದಾಗಿಸಿ ಕೊಂಡಿದೆ. ದಿನನಿತ್ಯ ಸರಾಸರಿ 20 ರಿಂದ 30 ಯೂನಿಟ್ ರಕ್ತವನ್ನು ರೋಗಿಗಳಿಗೆ ಪೂರೈಸುತ್ತಿದೆ. ಅಲ್ಲದೇ ಪ್ರತಿನಿತ್ಯ ಆವಶ್ಯವಿರುವ ತಾಜಾ ರಕ್ತಗಳ ತುರ್ತು ಮನವಿಯನ್ನು ಕೂಡಾ ಸ್ವೀಕರಿಸಿ ದಾನಿಗಳನ್ನು ಹುಡುಕಿ ಅಗತ್ಯವಿರುವ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಪೂರೈಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದೆ. COVID – 19 ತುರ್ತು ಸಮಯದಲ್ಲಿ 700 ಕ್ಕೂ ಅಧಿಕ ರಕ್ತದಾನಿಗಳನ್ನು ನೇರವಾಗಿ ರಕ್ತನಿಧಿಗಳಿಗೆ ಪೂರೈಸಿ ಕೊರೋನಾ ಭೀತಿಯ ನಡುವೆಯೂ ತುರ್ತು ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ರಕ್ತದಾನಿಗಳನ್ನು ಪೂರೈಕೆ ಮಾಡಿದ ಕೀರ್ತಿಗೆ ಪಾತ್ರವಾಗಿದೆ.

ಜೂನ್ 26 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವುದರ ಜೊತೆೆಗೆ, ರಕ್ತದಾನ ಮಾಡಿ ಜೀವದಾವಿಗಳಾಗಬೇಕಾಗಿ ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ
ಅಶ್ರಫ್ : 7899267686
ಇಮ್ರಾನ್ ಬೈತಾರ್ : 89040 72124

By dtv

Leave a Reply

Your email address will not be published. Required fields are marked *

error: Content is protected !!