ಉಡುಪಿ:ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
![](http://dtvkannada.in/wp-content/uploads/2022/06/IMG-20220625-WA0030.jpg)
ಮೃತಪಟ್ಟ ವಿದ್ಯಾರ್ಥಿ ಸ್ರಜನ್ ನಾಗರಾಜ್ ನಾಯ್ಕ ಎಂದು ತಿಳಿದು ಬಂದಿದೆ. ಇನ್ನೋರ್ವ ವಿದ್ಯಾರ್ಥಿ ಸಹ ಸವಾರ ದಿವಾಕರ ನಾಯ್ಕ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಗಂಗಾನಾಡಿನಿಂದ ಹೊಸಂಗಡಿ ಅಜ್ಜಿ ಮನೆಗೆ ಬಂದಿದ್ದ ಐಟಿಐ ವಿದ್ಯಾರ್ಥಿ ಸ್ರಜನ್ ಇಂದು ಬೆಳಗ್ಗೆ ಸಂಬಂಧಿಕ ದಿವಾಕರ ಜತೆ ಬೈಕಲ್ಲಿ ತೆರಳುತ್ತಿರುವಾಗ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಬೈಕಿಗೆ ಡಿಕ್ಕಿ ಹೊಡೆದ ದುರ್ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಈ ಬಗ್ಗೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.