dtvkannada

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಯ್ಯ(45) ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜ್ವರದ ಹಿನ್ನಲೆ ಕಳೆದ ಎರಡು ದಿನಗಳಿಂದ ಕರ್ತವ್ಯಕ್ಕೆ ರಜೆಯಲ್ಲಿದ್ದ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಉಂಟಾಗಿದ್ದು ಬಾನುವಾರ ಸಂಜೆ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮುಂಜಾನೆ ನಿಧನ ಹೊಂದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಪತ್ನಿ
ಮತ್ತು ಇಬ್ಬರು ಪುಟ್ಟ ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!