ಉಡುಪಿ:ವಿದ್ಯಾರ್ಥಿನಿಯೊಬ್ಬಳು ತನ್ನ ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.
![](http://dtvkannada.in/wp-content/uploads/2022/06/9b042eecb4bd12d6c21c6bda2516ecc08154ead46d66aef85b5428991a2d0d55.0.webp)
ಮೃತಪಟ್ಟ ವಿದ್ಯಾರ್ಥಿನಿ ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಎಂದು ತಿಳಿದು ಬಂದಿದೆ.
ಕುಂದಾಪುರ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ ತಲೆನೋವು ಎಂದು ಕೋಣೆಗೆ ಹೋಗಿ ಒಬ್ಬಳೇ ಮಲಗಿದ್ದಳು.
ಆದರೆ ಸ್ವಲ್ಪ ಸಮಯ ಕಳೆದು ನೋಡಿದಾಗ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.