dtvkannada

ಪುತ್ತೂರು: ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ತಿಳಿದು ಬಂದಿದೆ. ರಘುರಾಮ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವಿರುದ್ಧ ಡಿಕ್ಕಿನಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸುತ್ತಿದ್ದ ಮಾರುತಿ ಓಮ್ನಿ ನಡುವೆ ತಿಂಗಳಾಡಿ ರಸ್ತೆಯ ಕುಂಬ್ರ ಸಮೀಪ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಘುನಾಥ ಶೆಟ್ಟಿ ಮತ್ತು ಸಹ ಸವಾರ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಘುರಾಮ ಶೆಟ್ಟಿ ಅವರು ಮೃತಪಟ್ಟಿದ್ದಾರೆ. ರಘುರಾಮ ಶೆಟ್ಟಿಯವರ ಪುತ್ರನ ಕಾಲು ಮುರಿತಕ್ಕೊಳಗಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!