dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ಬೆಳಕಿಗೆ ಬಂದಿದ್ದು ಆರೋಪಿಗಳು ಪೊಲೀಸರ ಅಥಿತಿಯಾಗಿದ್ದಾರೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಸಾಗಣೆ ಮಾಡಲು ಯತ್ನಿಸಿದ್ದರು. ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 43.29 ಲಕ್ಷ ರೂ ಎಂದು ಅಂದಾಜಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಅದೇ ರೀತಿ ಮತ್ತೊಂದು ಪ್ರಕರಣದಲ್ಲಿ ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಆತನ ಬಳಿ 5.97 ಲಕ್ಷ ರೂ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಈತ ಬ್ಯಾಗ್‌ನಲ್ಲಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!