dtvkannada

'; } else { echo "Sorry! You are Blocked from seeing the Ads"; } ?>

ಸುಳ್ಯ: ಸುಳ್ಯದ ಬೆಳ್ಳಾರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಕಳೆಂಜದ ಮಸೂದ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಆಗಸ್ಟ್‌ 29 ರ ತನಕ ವಿಸ್ತರಿಸಲಾಗಿದೆ.

ಮಸೂದ್‌ ಅವರು ಜುಲೈ 19 ರಂದು ಗುಂಪು ಹಲ್ಲೆಗೊಳಗಾಗಿ ಜುಲೈ 21 ರಂದು ಸಾವನ್ನಪ್ಪಿದ್ದರು. ಈ ಕುರಿತಂತೆ 8 ಮಂದಿ ಆರೋಪಿಗಳಾದ ಅಭಿಲಾಷ್‌, ಸುನಿಲ್‌ ಕೆ., ಸುಧೀರ್‌, ಶಿವ ಪ್ರಸಾದ್‌, ರಂಜಿತ್‌ ಬಿ, ಸದಾಶಿವ ಪೂಜಾರಿ, ರಂಜಿತ್‌, ಭಾಸ್ಕರ ಕೆ. ಎಂ. ಅವರನ್ನು ಪೊಲೀಸರು ಜುಲೈ 20 ರಂದು ದಸ್ತಗಿರಿ ಮಾಡಿದ್ದರು.

'; } else { echo "Sorry! You are Blocked from seeing the Ads"; } ?>

ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅವರ ನ್ಯಾಯಾಂಗ ಬಂಧನದ ಅವಧಿ ಆಗಸ್ಟ್‌ 16 ರಂದು ಮುಕ್ತಾಯಗೊಂಡಿತ್ತು.

ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ಪುನಃ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯವು ಆಗಸ್ಟ್‌ 29 ರ ತನಕ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!