dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಹೆದ್ದಾರಿಯಲ್ಲಿ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಕಾರಣ 9 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತುಮುಕೂರಿನ ಶಿರಾ ಸಮೀಪ ಇಂದು ಮುಂಜಾನೆ ನಡೆದಿದೆ.

ಮೃತಪಟ್ಟವರನ್ನು ಮಾನ್ವಿ ತಾಲ್ಲೂಕಿನ ಸುಜಾತಾ (25), ಲಕ್ಷ್ಮಿ 913), ವಿನೋದ್ (3), ಕ್ರೂಸರ್ ಚಾಲಕ ಕೃಷ್ಣಪ್ಪ (25) ಎಂದು ತಿಳಿದುಬಂದಿದ್ದು ಉಳಿದವರ ಹೆಸರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

ರಾಯಚೂರು ಜಿಲ್ಲೆಯ ವಿವಿಧ ಗ್ರಾಮಗಳಿಂದ ತುಮಕೂರು ಹಾಗೂ ಬೆಂಗಳೂರಿನಲ್ಲಿ ಕೂಲಿ ಕೆಲಸಕ್ಕೆ ಎಂದು ಇವರೆಲ್ಲರೂ ನಿನ್ನೆ ಸಂಜೆ ತಮ್ಮ ಗ್ರಾಮಗಳಿಂದ ಕ್ರೂಸರ್ನಲ್ಲಿ ಹೊರಟಿದ್ದರು.

ಬೆಳಗಿನ ಜಾವ ನಾಲ್ಕು ಮೂವತ್ತರ ಸಂದರ್ಭದಲ್ಲಿ ಎಲ್ಲರೂ ಸಂಪೂರ್ಣ ನಿದ್ರೆಗೆ ಜಾರಿದ್ದರು.

'; } else { echo "Sorry! You are Blocked from seeing the Ads"; } ?>

ಈ ವೇಳೆ ದುರ್ಘಟನೆ ಸಂಭವಿಸಿದ್ದು ಶಿರಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.

ಅಪಘಾತಕ್ಕೆ ಒಳಗಾದ ಕುಟುಂಬಕ್ಕೆ ಪರಿಹಾರ ಘೋಷಣೆ: ಕೇಂದ್ರ ಹಾಗೂ ರಾಜ್ಯ ಸರಕಾರದ ವತಿಯಿಂದ ಮೃತಪಟ್ಟ ಹಾಗೂ ಗಾಯಳುಗಳಿಗೆ‌ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ತಲಾ 5 ಲಕ್ಷ ಹಾಗೂ 2 ಲಕ್ಷ ಮತ್ತು ಗಾಯಾಳುಗಳಿಗೆ 50 ಸಾವಿರ ಮತ್ತು ರಾಜ್ಯ‌ ಸರಕಾರದಿಂದ ಗಾಯಳುಗಳ ಚಿಕಿತ್ಸೆ ವೆಚ್ಚವನ್ನು ಭರಿಸಲಾಗುವುದೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!