dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಅತೀ ವೇಗ ಮತ್ತು ಅಜಾಗರುಕತೆಯಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆಯೆಂದು ವರದಿಯಾಗಿದೆ.

ಘಟನೆಯು ಮಂಗಳೂರು – ಕಿನ್ನಿಗೋಳಿ – ಕಟೀಲು – 1 ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.

'; } else { echo "Sorry! You are Blocked from seeing the Ads"; } ?>

ಈ ಸಂದರ್ಭದಲ್ಲಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!