dtvkannada

'; } else { echo "Sorry! You are Blocked from seeing the Ads"; } ?>

ಕಡಬ: ಸರಗಳ್ಳತನ/ ಮಾನಭಂಗ ನಡೆಸಿ ಎಸ್ಕೇಪ್ ಆಗುತ್ತಿದ್ದಾಗ ಕಾರು ಅಪಘಾತ ನಡೆದ ಪ್ರಕರಣವು ಇಂದು ಹೊಸ ತಿರುವು ಪಡೆದಿದ್ದು, ಬೆಡ್ ಶೀಟ್ ಮಾರಲು ಹೋದ ವ್ಯಾಪರಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಸುಳ್ಳಾರೋಪ ಮಾಡಲಾಗಿದೆ ಎನ್ನಲಾಗಿದೆ.

ಇಂದು ಹಲ್ಲೆ ಮಾಡುತ್ತಿರುವ ವೀಡಿಯೋ ಒಂದು ವೈರಲ್ ಆದ ಬೆನ್ನಲ್ಲೇ ಸತ್ಯಾಸತ್ಯತೆ ಹೊರಬಿದ್ದಿದ್ದು, ಮುಸ್ಲಿಂ ವ್ಯಾಪಾರಸ್ಥರು ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಸರಗಳ್ಳತನ/ಮಾನಭಂಗಕಕ್ಕೆ ಯತ್ನ ಎಂದು ಆರೋಪಿಸಿ ಇಬ್ಬರು ಮುಸ್ಲಿಮ್ ಜವಳಿ ವ್ಯಾಪಾರಿಗಳನ್ನು ತಡೆದು ನಿಲ್ಲಿಸಿದ ಗುಂಪೊಂದು ನಿನ್ನೆ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದು, ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ.

ಹಲ್ಲೆ ವೀಡಿಯೋ ನೋಡಿ

ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮೀಝುದ್ದೀನ್ ಹಲ್ಲೆಗೊಳಗಾದವರು.
ಹಲವು ವರ್ಷಗಳಿಂದ ಜವಳಿ ವ್ಯಾಪಾರ ಮಾಡುತ್ತಿದ್ದ ರಫೀಕ್ ಮತ್ತು ರಮೀಸುದ್ದೀನ್ ಈ ಮೊದಲು ದ್ವಿಚಕ್ರ ವಾಹನದಲ್ಲಿ ಹಳ್ಳಿ ಹಳ್ಳಿಗಳಿಗೆ ತೆರಳಿ ಜವಳಿ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಕಾರು ಖರೀದಿಸಿ ಜವಳಿ ವ್ಯಾಪಾರ ಮುಂದುವರಿಸಿದ್ದರು.

'; } else { echo "Sorry! You are Blocked from seeing the Ads"; } ?>

ನಿನ್ನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮಕ್ಕೆ ಜವಳಿ ವ್ಯಾಪಾರಕ್ಕೆ ಹೋಗಿದ್ದಾರೆ. ಗ್ರಾಮದ ಮಹಿಳೆಯೊಬ್ಬರು ಜವಳಿ ಖರೀದಿಸಲು ಮುಂದಾಗಿದ್ದು, ಈ ವೇಳೆ ಅವರು ಚೌಕಾಶಿ ನಡೆಸಿದ್ದಾರೆ. ಅಲ್ಲಿಂದ ಅವರಿಬ್ಬರೂ ತೆರಳಿದಾಗ ಮಾರ್ಗ ಮಧ್ಯೆ ಗುಂಪೊಂದು ಅವರನ್ನು ತಡೆದು ನಿಲ್ಲಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯಿಂದ ಪ್ರಜ್ಞೆ ತಪ್ಪಿದ ಬಳಿಕ ಗುಂಪು ಅಲ್ಲಿಂದ ತೆರಳಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರೇ ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಕುಟುಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ಈ ಮಧ್ಯೆ ಅದೇ ಗ್ರಾಮದ ಮಹಿಳೆಯೊಬ್ಬರಿಂದ ಸರಗಳ್ಳತನ/ ಮಾನಭಂಗದ ಸುಳ್ಳು ದೂರು ಕೊಡಿಸಲಾಗಿದೆ. ಇದೀಗ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿರುವ ಸಂತ್ರಸ್ತರೇ ಆರೋಪಿಗಳೆಂದು ಬಿಂಬಿಸಲಾಗಿದೆ ಎಂದು ರಫೀಕ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಸದ್ಯ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮತ್ತೊಮ್ಮೆ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!