dtvkannada

ಸುಳ್ಯ: ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ ಆರೋಪಿಯಾಗಿದ್ದು ಈತ ಪತ್ನಿಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿಸಿ ಕೆಲ ದಿನಗಳ ಹಿಂದೆ ಪರಾರಿಯಾಗಿದ್ದ.

ಈ ಕುರಿತು ಪ್ರಕರಣದ ದಾಖಲಿಸಿಕೊಂಡು ತನಿಖೆಯ ಜಾಡು ಹಿಡಿದು ಹೊರಟ ಸುಳ್ಯ ಠಾಣಾ ಪೊಲೀಸರು ಪಶ್ಚಿಮ ಬಂಗಾಲದ ಪೊಲೀಸರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ನಡೆದು ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು ಪೊಲೀಸರು ಕೊಲೆ ಆರೋಪಿ ಇಬ್ರಾನ್ ನ ವಿಚಾರಣೆಯನ್ನು ಮುಂದುವರೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!