ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬೋಳಿಯಾರು ವಲಯ ಕಾಂಗ್ರೆಸ್ ಸಮಿತಿ ಗ್ರಾಮದ ಜೋನ್ ಕಾಂಪ್ಲೆಕ್ಸ್ನಲ್ಲಿ ಮಂಗಳವಾರ ಸಂಜೆ ಪೂರ್ವ ಭಾವಿ ಸಭೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ವೀಕ್ಷಕರಾದ ಅಬ್ದುಲ್ ರಹಿಮಾನ್ ಕೊಡಿಜಾಲ್ ಮಾತನಾಡಿ, ಸಿದ್ಧರಾಮಯ್ಯ ಅವರು ಜನಪರ ನಾಯಕರಾಗಿದ್ದು ಅವರ ಭೇಟಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆನೀಡಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಚ್ಯುತ ಗಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರ ಭೇಟಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಬೋಳಿಯಾರು, ಬೋಳಿಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೆಸಿಂತಾ ಪಿಂಟೋ, ಮಾಜಿ ತಾಲುಕು ಪಂಚಾಯತ್ ಸದಸ್ಯ ಬಿ.ಕೆ. ಅಬ್ದುಲ್ ಜಬ್ಬಾರ್, ಬೋಳಿಯಾರ್ ಯುವ ಕಾಂಗ್ರೆಸ್ ಅಧ್ಯಕ್ಷ ಶಮೀರ್ ಓ.ಕೆ., ಕಾಂಗ್ರೆಸ್ ಮುಖಂಡ ಮುನೀರ್ ಬಂಡಸಾಲೆ ಸಭೆಯಲ್ಲಿ ಉಪಸ್ಥಿತರಿದ್ದರು.
ಬೋಳಿಯಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ ಶುಕೂರ್ ಕಾರ್ಯಕ್ರಮ ನಿರೂಪಿಸಿದರು.